ಬ್ರೇಕಿಂಗ್ ನ್ಯೂಸ್
11-02-21 04:35 pm Mangalore Correspondent ಕ್ರೈಂ
ಮಂಗಳೂರು, ಫೆ.11: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.
ಕಣಚೂರು ಮೆಡಿಕಲ್ ಕಾಲೇಜಿನ ಬಿಪಿಟಿ ವಿಭಾಗದಲ್ಲಿ ಐದು ಮಂದಿ ಕಿರಿಯ ವಿದ್ಯಾರ್ಥಿಗಳಿಗೆ ಅದೇ ವಿಭಾಗದ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದರು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಗೆ ಫೆ.8ರಂದು ದೂರು ನೀಡಿತ್ತು.


ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಇಂದು 11 ಮಂದಿಯನ್ನು ಬಂಧಿಸಿದ್ದಾರೆ. ಮೊಹಮ್ಮದ್ ಶಮ್ಮಾಸ್, ರೋಬಿನ್ ಬಿಜು, ಆಲ್ವಿನ್ ಜಾಯ್, ಜಾಬಿನ್ ಮಹ್ರೂಫ್, ಜೆರೋನ್ ಸಿರಿಲ್, ಜಾಫಿನ್ ರಾಯ್ಚನ್, ಮಹ್ಮದ್ ಸೂರಜ್, ಆಶಿನ್ ಬಾಬು, ಅಬ್ದುಲ್ ಬಸಿತ್, ಅಬ್ದುಲ್ ಅನಾಸ್ ಮಹಮ್ಮದ್, ಅಕ್ಷಯ್ ಕೆ.ಎಸ್ ಬಂಧಿತರಾಗಿದ್ದು, ಎಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೂ ಏಳು ಮಂದಿಯ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇವರು ಫೆ.5ರಂದು ಕಾಲೇಜಿನಲ್ಲಿ ಈ ಸಾಲಿನಲ್ಲಿ ತರಗತಿ ಸೇರ್ಪಡೆಯಾಗಿದ್ದ ಕಿರಿಯ ವಿದ್ಯಾರ್ಥಿಗಳನ್ನು ತಮ್ಮ ತರಗತಿಗೆ ಕರೆಸಿಕೊಂಡು ತಲೆ ತಗ್ಗಿಸಿ ನಿಲ್ಲಿಸುವುದು, ಮೀಸೆ ತೆಗೆಸುವಂತೆ ದಬಾಯಿಸುವುದು, ಅವರನ್ನು ತಳ್ಳಿಕೊಂಡು ವಾರ್ನ್ ಮಾಡುತ್ತಾ ಕೀಟಲೆ ಮಾಡುತ್ತಿದ್ದರು. ಈ ಬಗ್ಗೆ ನೊಂದ ವಿದ್ಯಾರ್ಥಿಗಳು ಬಿಪಿಎಡ್ ಕೋರ್ಸ್ ವಿಭಾಗ ಪ್ರಮುಖರಲ್ಲಿ ಹೇಳಿಕೊಂಡಿದ್ದರು. ವಿಭಾಗ ಮುಖ್ಯಸ್ಥ ಜಾರ್ಜ್ ಕಾಲೇಜಿನ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದು, ಪೊಲೀಸರಿಗೆ ದೂರು ನೀಡಲಾಗಿತ್ತು.

ಇತ್ತೀಚೆಗೆ ಅಡ್ಯಾರಿನ ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಇದೇ ರೀತಿಯ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಕಿರಿಯ ವಿದ್ಯಾರ್ಥಿಗಳನ್ನು ತರಗತಿಗೆ ಕರೆಸ್ಕೊಂಡು ಕೀಟಲೆ ನಡೆಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು 9 ಮಂದಿಯನ್ನು ಬಂಧಿಸಿದ್ದರು. ಇದೀಗ ಒಂದೇ ತಿಂಗಳ ಅಂತರದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ರ್ಯಾಗಿಂಗ್ ; ಕಾಲೇಜನ್ನೇ ತೊರೆದ ಬಿ ಫಾರ್ಮಾ ವಿದ್ಯಾರ್ಥಿ, ಫೀಸ್ ಹಿಂತಿರುಗಿಸುವಂತೆ ಪೊಲೀಸ್ ದೂರು
ರ್ಯಾಗಿಂಗ್ ಪ್ರಕರಣ ; 9 ವಿದ್ಯಾರ್ಥಿಗಳ ಬಂಧನ, ರ್ಯಾಗಿಂಗ್ ಘಟನೆಗಳಿಗೆ ಆಯಾ ಸಂಸ್ಥೆಗಳೇ ಹೊಣೆ ; ಕಮಿಷನರ್
In connection to the Ragging case at Kanachur College in Ullal the Police have arrested 11 Students out of 18. The arrested are all identified as students from Kerala.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am