ಬ್ರೇಕಿಂಗ್ ನ್ಯೂಸ್
12-02-21 12:43 pm Headline Karnataka News Network ಕ್ರೈಂ
ಹೊನ್ನಾವರ, ಫೆ.12 : ಅಮೆರಿಕದಲ್ಲಿ ಉದ್ಯೋಗ ಗಿಟ್ಟಿಸುವ ಆಸೆಗೆ ಬಿದ್ದ ಯುವತಿಯೊಬ್ಬಳು ಜಾಲತಾಣದ ವಂಚನೆಗೊಳಗಾಗಿ ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ನೇತ್ರಾವತಿ (25) ಹಣ ಕಳೆದುಕೊಂಡ ಯುವತಿ. ನರ್ಸಿಂಗ್ ಕೋರ್ಸ್ ಮಾಡಿದ್ದ ನೇತ್ರಾವತಿ ಕೆಲವು ವರ್ಷ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಲಾಕ್ಡೌನ್ ಬಳಿಕ ತಮ್ಮೂರಿಗೆ ಬಂದು, ಬೇರೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತಿದ್ದರು. ಮತ್ತೆ ವಿದೇಶದಲ್ಲೇ ಉದ್ಯೋಗ ಮಾಡುವ ಆಕಾಂಕ್ಷೆಯಿಂದ ಜಾಲತಾಣದಲ್ಲಿ ಅರ್ಜಿ ಹಾಕಿ, ಹುಡುಕಾಟದಲ್ಲಿ ತೊಡಗಿದ್ದರು. ಇದೇ ವೇಳೆ, ನೇತ್ರಾವತಿ ಇ-ಮೇಲ್ ಗೆ ಮೇಲ್ ಸಂದೇಶ ಬಂದಿದ್ದು ಅಮೆರಿಕದಲ್ಲಿ ನರ್ಸಿಂಗ್ ಉದ್ಯೋಗದ ಭರವಸೆ ನೀಡಿದ್ದರು. ಅದನ್ನು ನಂಬಿ ಅರ್ಜಿ ಹಾಕಿದ್ದ ನೇತ್ರಾವತಿ ಆರು ತಿಂಗಳಲ್ಲಿ ಸರದಿಯಂತೆ ಬರೋಬ್ಬರಿ 57.14 ಲಕ್ಷ ಕಳೆದುಕೊಂಡಿದ್ದಾರೆ.

ಅಪರಿಚಿತ ಇ-ಮೇಲ್ ಸಂದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ನಮೂದಿಸಿದ್ದರು. ಅದಕ್ಕೆ ಕರೆ ಮಾಡಿದ್ದ ನೇತ್ರಾವತಿ ತನ್ನ ಪರಿಚಯ ಹೇಳಿಕೊಂಡಿದ್ದರು. ಕರೆ ಸ್ವೀಕರಿಸಿದ್ದ ವಂಚಕರು, ಯುವತಿಗೆ ನೇರವಾಗಿ ಪ್ರಶ್ನೆ ಪತ್ರಿಕೆ ಕಳುಹಿಸಿಕೊಟ್ಟು ಇಂಟರ್ವ್ಯೂ ಎಂದು ಉತ್ತರಿಸುವಂತೆ ತಿಳಿಸಿದ್ದರು. ಉತ್ತರ ಪತ್ರಿಕೆಯ ಬಳಿಕ ಆರೋಪಿಗಳು ಪಾಸ್ಪೋರ್ಟ್, ವೀಸಾ, ವೈದ್ಯಕೀಯ ಪ್ರಮಾಣಪತ್ರ, ಆರೋಗ್ಯ ವಿಮೆ ಮುಂತಾದವುಗಳಿಗೆ ಶುಲ್ಕ, ತೆರಿಗೆ ಪಾವತಿಸಲು ಹೇಳಿದ್ದರು. ಇದನ್ನು ನಿಜವೆಂದೇ ನಂಬಿದ ನೇತ್ರಾವತಿ, ಆರೋಪಿಗಳು ನೀಡಿದ್ದ ವಿವಿಧ ಬ್ಯಾಂಕ್ ಖಾತೆಗಳಿಗೆ 2020ರ ಆ.13ರಿಂದ 2021ರ ಜ.17ರ ತನಕ ಹಂತ ಹಂತವಾಗಿ 57.14 ರೂ. ಲಕ್ಷ ಹಣ ಜಮೆ ಮಾಡಿದ್ದಾರೆ.

ಅಮೆರಿಕದಲ್ಲಿ ಭಾರೀ ಸಂಬಳದ ಉದ್ಯೋಗವನ್ನು ನಂಬಿ ತಮ್ಮ ಸಂಪಾದನೆ, ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ, ಬ್ಯಾಂಕ್ಗಳಲ್ಲಿ ಸಾಲ ಮಾಡಿ ಹಣ ಹೊಂದಿಸಿದ್ದ ನೇತ್ರಾವತಿಯವರು ಆರು ತಿಂಗಳ ಅವಧಿಯಲ್ಲಿ ಇಷ್ಟೆಲ್ಲಾ ಹಣ ಪಾವತಿಸಿದ್ದರೂ ನೇಮಕಾತಿ ಆದೇಶ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಹಿಂದೆ ಸಂಪರ್ಕಿಸಿದ ದೂರವಾಣಿ ನಂಬರಿಗೆ ಕರೆ ಮಾಡಿ ಕೇಳಿದರೆ, ಅವರಿಂದ ಯಾವುದೇ ರೀತಿಯ ಸ್ಪಷ್ಟನೆಯಾಗಲೀ ಹಣ ಮರಳಿಸುವ ಬಗ್ಗೆ ಪ್ರತಿಕ್ರಿಯೆಯೂ ಬರಲಿಲ್ಲ. ಇದರಿಂದ ನೇತ್ರಾವತಿಗೆ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು, ಕಾರವಾರದ ಸೈಬರ್ ಅಪರಾಧ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.
Read: Exclusive: ಕೆನಡಾದಲ್ಲಿ ನರ್ಸಿಂಗ್ ನೌಕರಿ ! ತಿಂಗಳಿಗೆ ಮೂರು ಲಕ್ಷ ವೇತನ ! ಉದ್ಯೋಗಕ್ಕೆ ನೋಂದಾಯಿಸಿದರೆ ಖೋತಾ !!
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am