ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm