ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am