ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm