ಬ್ರೇಕಿಂಗ್ ನ್ಯೂಸ್
20-02-21 04:26 pm Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ. 20 : ದಕ್ಷಿಣ ಕನ್ನಡ, ಕೊಡಗು, ಉಡುಪಿ ಸೇರಿದಂತೆ 30ಕ್ಕೂ ಹೆಚ್ಚು ಕಡೆ ಕಳ್ಳತನ ನಡೆಸಿದ್ದ ಕುಖ್ಯಾತ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ ಪೇಟೆಯಲ್ಲಿರುವ ಸತೀಶ್ ಯಾನೆ ಲಕ್ಷ್ಮೀ ನಾರಾಯಣ ನಾಯಕ್ ಎಂಬವರ ಅಂಗಡಿಯಲ್ಲಿ 2020, ನವೆಂಬರ್ 10ರ ರಾತ್ರಿ ಕಳ್ಳತನ ನಡೆದಿತ್ತು. 45 ಸಾವಿರ ನಗದು ಕದ್ದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ ನೇತೃತ್ವದಲ್ಲಿ ಅಪರಾಧಿಯ ಪತ್ತೆಗೆ ತಂಡವನ್ನು ರಚಿಸಿ, ಬಲೆ ಬೀಸಲಾಗಿತ್ತು. ಇದೀಗ ಪ್ರಕರಣ ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು, ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ಹಮೀದ್ ಯಾನೆ ಕುಂಞ ಮೋನು (46) ಎಂಬಾತನನ್ನು ಬಂಧಿಸಿದ್ದಾರೆ.
ಹಮೀದ್ ಮೇಲೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿನ 15 ಪೊಲೀಸ್ ಠಾಣೆಗಳಲ್ಲಿ ಸುಮಾರು 30 ಕ್ಕಿಂತಲೂ ಹೆಚ್ಚಿನ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೋರ್ವ ಆರೋಪಿ ಬಂಟ್ವಾಳ ಸಜಿಪ ನಿವಾಸಿಯಾದ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಎಂಬಾತನನ್ನು ಈಗಾಗಲೇ ವಿಟ್ಲ ಪೊಲೀಸರು ಬಂಧಿಸಿದ್ದು, ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಹಾಗೂ ಪುತ್ತೂರು ಉಪ ವಿಭಾಗದ ಉಪಾಧೀಕ್ಷಕರಾದ ಗಾನ ಪಿ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಠಾಣಾ ಪಿಎಸ್ಐ ಈರಯ್ಯ ಡಿ ಎನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಎಸ್ಐ ಚೋಮ ಎಂ ಪಿ , ಹರಿಶ್ಚಂದ್ರ, ಇರ್ಷಾದ್ ಪಿ, ಜಗದೀಶ್, ಪ್ರತಾಪ್, ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ದಿವಾಕರ ಮತ್ತು ಸಂಪತ್, ಚಾಲಕ ಕನಕರಾಜ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Notorious thief who has more than 30 cases has been arrested by uppinangady police in Mangalore.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm