ಬ್ರೇಕಿಂಗ್ ನ್ಯೂಸ್
21-02-21 01:48 pm Udupi Correspondent ಕ್ರೈಂ
ಉಡುಪಿ, ಫೆಬ್ರವರಿ 21; ಕಿವಿ ಕೇಳದ, ಮಾತನಾಡಲು ಬಾರದ 15 ವರ್ಷ ಪ್ರಾಯದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪದಡಿಯಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ಎಲ್ಲಾ ದೋಷಾರೋಪಣೆಗಳು ರುಜುವಾತಾದ ಹಿನ್ನೆಲೆಯಲ್ಲಿ ಆತ ಅಪರಾಧಿಯಾಗಿದ್ದಾನೆ.
ಫೆಬ್ರವರಿ 22ರ ಸೋಮವಾರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2019ರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. 2018ರ ಡಿಸೆಂಬರ್ ತಿಂಗಳಿನಲ್ಲಿ 15 ವರ್ಷದ ತನ್ನ ಮನೆ ಸಮೀಪದ ಬಾಲಕಿಯನ್ನು ಹರೀಶ್ (33) ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ.

ಸಂತ್ರಸ್ತ ಬಾಲಕಿಗೆ ಕಿವಿ ಕೇಳದ, ಮಾತನಾಡಲು ಬಾರದ ಹಿನ್ನೆಲೆ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. 2019ರಲ್ಲಿ ಒಂದು ದಿನ ರಾತ್ರಿ ಆಕೆ ಹೊಟ್ಟೆನೋವಿನಿಂದ ಬಳಲಿ ತೀವ್ರ ರಕ್ತಸ್ರಾವ ಉಂಟಾಗಿದ್ದು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಪೋಷಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಬಾಲಕಿ 7ನೇ ತರಗತಿ ಓದಿದ್ದು, ಪಕ್ಕದ ಮನೆಯ ಆರೋಪಿಯನ್ನು ಕೈ ಸನ್ನೆ ಹಾಗೂ ಬರವಣಿಗೆ ಮೂಲಕ ಗುರುತಿಸಿದ ಹಿನ್ನೆಲೆ ಫೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು.
ಅಂದಿನ ಕಾರ್ಕಳ ಪ್ರಭಾರ ಸಿಪಿಐ ಮಹೇಶ್ ಪ್ರಸಾದ್ ಮೊದಲಿಗೆ ತನಿಖೆ ನಡೆಸಿದ್ದು, ಬಳಿಕ ಸಿಪಿಐ ಸಂಪತ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 22 ಸಾಕ್ಷಿಗಳ ಪೈಕಿ ಸಂತ್ರಸ್ತೆ ತಾಯಿ ಸೇರಿದಂತೆ 13 ಮಂದಿ ಸಾಕ್ಷ್ಯ ನುಡಿದಿದ್ದರು. ಡಿಎನ್ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿತ್ತು.
District additional and sessions POCSO special court justice Yadav Vanamala Anand Rao who heard arguments of the case involving the rape of 15-year-old deaf and mute girl making her deliver a baby girl has concluded that the guilt of the accused are proved and reserved the verdict for February 22.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm