ಬ್ರೇಕಿಂಗ್ ನ್ಯೂಸ್
22-02-21 05:48 pm Mangalore Correspondent ಕ್ರೈಂ
ಉಳ್ಳಾಲ, ಫೆ.22: ತಲಪಾಡಿ ಗಡಿಯಲ್ಲಿ ಅಕ್ರಮ ಮರಳು ಸಾಗಣೆ ಅವ್ಯಾಹತ ಆಗಿರುವುದಕ್ಕೆ ಮತ್ತೊಂದು ತಾಜಾ ನಿದರ್ಶನ ಲಭಿಸಿದೆ. ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿ ಬಿದ್ದಿದ್ದು, ದೇವಸ್ಥಾನದಿಂದ ಹೊರಬರುತ್ತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯ ನದಿಯಿಂದ ದಿನ ನಿತ್ಯವೂ ಅಕ್ರಮವಾಗಿ ಮರಳನ್ನು ಎತ್ತಿ ತಲಪಾಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಿಂದ ಕೇರಳಕ್ಕೆ ಮರಳನ್ನು ಸರಬರಾಜು ಮಾಡಲಾಗುತ್ತಿದೆ. ಕಳೆದ ಜನವರಿ 19 ರಂದು ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಫಾರ್ಮ್ಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಇಬ್ಬರು ಕಾಲು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ನಡೆದಿತ್ತು. ನಂತರ 24 ಜನವರಿಯಂದು ತೊಕ್ಕೊಟ್ಟಿನ ಸಹರಾ ಆಸ್ಪತ್ರೆ ಮುಂಭಾಗದಲ್ಲಿ ವೃದ್ಧನೋರ್ವನಿಗೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದು ಹಿಟ್ & ರನ್ ಮಾಡಿದ ಟಿಪ್ಪರನ್ನು ಪೊಲೀಸರು ವಶಕ್ಕೆ ತೆಗೆದು ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಮುಖ್ಯ ರಸ್ತೆ ತಪ್ಪಿಸಿ ತಲಪಾಡಿಯ ಒಳ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿ ಬಿದ್ದಿದೆ.


ದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ದಿನನಿತ್ಯವೂ ಅಕ್ರಮ ಮರಳು ಸಾಗಾಟ ಆಗುವುದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸ್ಥಳೀಯರು ದೂರಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮರಳು ಮಾಫಿಯಾದಲ್ಲಿ ಸ್ಥಳೀಯ ಪಕ್ಷ ರಹಿತರಾಗಿ ಯುವಕರು ಮತ್ತು ಸಹೋದರರಿಬ್ಬರು ಶಾಮೀಲಾಗಿರುವುದಾಗಿ ತಿಳಿದು ಬಂದಿದೆ. ಟಿಪ್ಪರ್ ಪಲ್ಟಿ ಆದ ವಿಷಯ ತಿಳಿದ ಕೂಡಲೇ ಉಳ್ಳಾಲ ಇನ್ಸ್ ಪೆಕ್ಟರ್ ಸಮೇತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಪ್ರದೇಶದಲ್ಲಿ ನಿತ್ಯ ಮರಳು ಸಾಗಣೆ ಆಗುತ್ತಿದ್ದರೂ, ಪೊಲೀಸರು ಕಣ್ಣಿದ್ದೂ ಕುರುಡರಾಗಿದ್ದಾರೆ. ಇವರ ನಿರ್ಲಕ್ಷ್ಯದಿಂದಾಗಿ ಅಕ್ರಮ ಮರಳು ಸಾಗಣೆ ಎಷ್ಟಿದೆ ಎನ್ನುವುದಕ್ಕೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮೆರಾಗಳೇ ಮೂಕ ಸಾಕ್ಷಿ ಎಂದು ಸ್ಥಳೀಯರು ತಿಳಿಸಿದ್ದಾರೆ.
A truck that was illegally transporting sand toppled at Ullal in Mangalore.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm