ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.

ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm