ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.

ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm