ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm