ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am