ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm