ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm