ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am