ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm