ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm