ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am