ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm