ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am