ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm