ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm