ಬ್ರೇಕಿಂಗ್ ನ್ಯೂಸ್
19-08-20 04:07 pm Headline Karnataka News Network ಕ್ರೈಂ
ಮುಂಬೈ , ಆಗಸ್ಟ್ 19: ವೈದ್ಯೆಯೊಬ್ಬಳು ಪತಿ ಹಾಗೂ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಕೊರಡಿ ಪ್ರದೇಶದ ಓಂ ನಗರದಲ್ಲಿರುವ ಮನೆಯಲ್ಲಿ ವೈದ್ಯೆ ಡಾ. ಸುಷ್ಮಾ ರಾಣೆ (41) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೂ ಮೊದಲು ಪತಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಧೀರಜ್(42) ಹಾಗೂ 11 ವರ್ಷ ಹಾಗೂ 5 ವರ್ಷದ ಪುಟ್ಟ ಮಕ್ಕಳನ್ನು ಕೊಲೆ ಮಾಡಿದ್ದಾಳೆ.
ಪತಿ ಹಾಗೂ ಮಕ್ಕಳ ಮೃತದೇಹ ಬೆಡ್ ರೂಂ ನಲ್ಲಿರುವ ಬೆಡ್ ಮೇಲೆ ಬಿದ್ದಿದ್ದರೆ, ವೈದ್ಯೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕೊರಡಿ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ವೈದ್ಯೆಯ ಕುಟುಂಬದ ಜೊತೆ ವಾಸವಾಗಿದ್ದ 60 ವರ್ಷದ ಮಹಿಳೆ ಬೆಡ್ ರೂಮ್ ಬಾಗಿಲು ತಟ್ಟಿದರೂ ಯಾರೂ ಹೊರಬರದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ 2 ಸಿರಿಂಜ್ ಗಳು ಹಾಗೂ ಡೆತ್ ನೋಟ್ ಸಿಕಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೀವನದಲ್ಲಿ ಖುಷಿಯಿಲ್ಲ ಎಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದಾಗಿ ಸುಷ್ಮಾ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಪ್ರಾಥಮಿಕ ವರದಿಯ ಪ್ರಕಾರ, ಸುಷ್ಮಾ ತನ್ನ ಪತಿ ಹಾಗೂ ಮಕ್ಕಳನ್ನು ಪ್ರಜ್ಞಾಹೀನ ಸ್ಥಿತಿಗೆ ತರಲು ನಿದ್ರೆಯ ಮಾತ್ರೆಗಳನ್ನು ಆಹಾರದಲ್ಲಿ ನೀಡಿರಬಹುದು. ನಂತರ ಇಂಜೆಕ್ಷನ್ ಚುಚ್ಚಿ ಸಾಯಿಸಿರಬಹುದು ತಿಳಿದುಬಂದಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm