ಬ್ರೇಕಿಂಗ್ ನ್ಯೂಸ್
05-03-21 02:49 pm Mangalore Correspondent ಕ್ರೈಂ
ಮಂಗಳೂರು, ಮಾ.5:ಎರಡೇ ತಿಂಗಳ ಅಂತರದಲ್ಲಿ ಮತ್ತೆರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ದಾಖಲಾಗಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮುಕ್ಕದಲ್ಲಿರುವ ಶ್ರೀನಿವಾಸ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮೂರನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದ ಕೆ.ಯು.ಶಮೀಲ್(23), ಮಹಮ್ಮದ್ ಬಾಝಿಲ್ (22), ಸಂಭ್ರಮ್ ಆಳ್ವಾ(20), ಅಶ್ವಿತ್ ಜಾನ್ಸನ್(21) ಬಂಧಿತರು.
ಆರೋಪಿಗಳು ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಕಾರ್ತಿಕ್ ಶೆಟ್ಟಿ ಎಂಬಾತನಿಗೆ ರ್ಯಾಗಿಂಗ್ ಮಾಡುತ್ತಿದ್ದ ಬಗ್ಗೆ ಕಾಲೇಜಿನ ಆಡಳಿತಕ್ಕೆ ದೂರು ನೀಡಲಾಗಿತ್ತು. ಕಾಲೇಜಿನಲ್ಲಿ ರ್ಯಾಗಿಂಗ್ ವಿರೋಧಿ ಕಮಿಟಿಯಿದ್ದು, ಅದರಲ್ಲಿ ಪ್ರಮುಖರಾಗಿರುವ ಕೆಮಿಸ್ಟ್ರಿ ವಿಭಾಗದ ಪ್ರೊಫೆಸರ್ ಡಾ.ಪ್ರವೀಣ್, ಆರೋಪಿತ ವಿದ್ಯಾರ್ಥಿಗಳನ್ನು ಕರೆದು ವಾರ್ನ್ ಮಾಡಿದ್ದಾರೆ. ಆದರೆ, ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಪ್ರೊಫೆಸರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಮಾಹಿತಿ ಪಡೆದ ಕಾಲೇಜಿನ ಡೀನ್ ಥಾಮಸ್ ಪಿಂಟೋ, ಆರೋಪಿತ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿದ್ದಾರೆ. ಅಲ್ಲದೆ, ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹಲ್ಲೆ ಮತ್ತು ರ್ಯಾಗಿಂಗ್ ನಡೆಸಿರುವ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು, ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ತಲೆ, ಗಡ್ಡ ಮೀಸೆ ಬೋಳಿಸದಿದ್ದರೆ ಬಿಡಲ್ಲ !
ಇನ್ನೊಂದು ಪ್ರಕರಣ ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದು, ಬಲ್ಮಠದಲ್ಲಿರುವ ಯೇನಪೋಯ ಪದವಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ವಿದ್ಯಾರ್ಥಿಗಳಾಗಿದ್ದ 9 ಮಂದಿಗೆ ಅದೇ ಕಾಲೇಜಿನವರು ರ್ಯಾಗಿಂಗ್ ನಡೆಸಿದ್ದಾರೆ. 9 ಜನ ವಿದ್ಯಾರ್ಥಿಗಳು ಪಂಪ್ವೆಲ್ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಾ.4ರಂದು ಈ ಬಾಡಿಗೆ ಮನೆಗೆ ದ್ವಿತೀಯ ವರ್ಷದ ಮೂರು ವಿದ್ಯಾರ್ಥಿಗಳು ಬಂದಿದ್ದು, ತಾವು ಸೀನಿಯರ್ಸ್ ಎಂದು ಹೇಳಿ ನಿಮ್ಮಲ್ಲಿ ಐದು ಜನ ಗಡ್ಡ ಮೀಸೆ ಬೋಳಿಸಿಕೊಂಡು ಬರಬೇಕೆಂದು ಸೂಚನೆ ನೀಡಿದ್ದಾರೆ. ಅಲ್ಲದೆ ಅವಾಚ್ಯವಾಗಿ ನಿಂದಿಸಿ, ಅವರ ಕೈಯಲ್ಲೇ ಟೀ ಮಾಡಿಸಿ ಕುಡಿದಿದ್ದಾರೆ. ನೀವು ನಾಳೆ ಸಂಜೆ 5 ಗಂಟೆ ಒಳಗಡೆ ತಲೆಕೂದಲು, ಗಡ್ಡ, ಮೀಸೆ ಬೋಳಿಸಿ ಬರಬೇಕು. ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ.
ಈ ಬಗ್ಗೆ ಪ್ರಥಮ ವರ್ಷದ ಕೆವಿನ್ ಮಥಲಾ ಜೇಕಬ್ ಎಂಬಾತ ಕಂಕನಾಡಿ ಠಾಣೆಗೆ ದೂರು ನೀಡಿದ್ದ. ಪ್ರಕರಣ ದಾಖಲಿಸಿದ ಪೊಲೀಸರು, ಕೇರಳ ಮೂಲದ ಕಣ್ಣೂರು ಜಿಲ್ಲೆಯ ನಿವಾಸಿ ಮಹಮ್ಮದ್ ಆದಿಲ್ (20), ಕ್ಯಾಲಿಕಟ್ ನಿವಾಸಿ ರಿಜಿನ್ ರಿಯಾಸ್ (20), ಮಹಮ್ಮದ್ ನಿಜಾಮುದ್ದೀನ್ ಬಿ.ಪಿ (20) ಎಂಬವರನ್ನು ಬಂಧಿಸಿದ್ದಾರೆ.
Seven students have been arrested by Mangalore City Police in two different cases. Also students assaulted the principal for questioning at srinivas college of engineering.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am