ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am