ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am