ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm