ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm