ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm