ಬ್ರೇಕಿಂಗ್ ನ್ಯೂಸ್
06-03-21 10:36 pm Headline Karnataka News Network ಕ್ರೈಂ
ಮೈಸೂರು, ಮಾ 6: ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬ ಪತ್ನಿಗೆ ವಂಚಿಸಿ ಮತ್ತೊಂದು ಹುಡುಗಿಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ ಲಷ್ಕರ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸಮೀವುಲ್ಲಾ, 2017 ರಲ್ಲಿ ಎಚ್.ಡಿ ಕೋಟೆಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿಯನ್ನು ಮದುವೆಯಾಗಿದ್ದ. ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ಬೈಕ್ ಹಾಗೂ ಚಿನ್ನಾಭರಣ ಪಡೆದುಕೊಂಡಿದ್ದ.
ಆರು ತಿಂಗಳು ಪತ್ನಿಯೊಂದಿಗೆ ಅನ್ಯೋನ್ಯವಾಗಿ ಸಂಸಾರ ನಡೆಸಿದ್ದ ಸಮೀವುಲ್ಲಾ, ದಿನ ಕಳೆದಂತೆ ಕ್ಷುಲ್ಲಕ ಕಾರಣಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವರ್ಷದ ನಂತರ ಗಂಡ ಸಮೀವುಲ್ಲಾ ಹಾಗೂ ಮನೆಯವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯ ಬಳಿಯಿದ್ದ ಚಿನ್ನಾಭರಣ ಕಸಿದುಕೊಂಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ ಸಮೀವುಲ್ಲಾ, ಇನ್ನೊಂದು ಹುಡುಗಿ ಜೊತೆ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆಗೊಳಗಾದ ಮಹಿಳೆಯು ಪತಿ ಸಮೀವುಲ್ಲಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾಳೆ. ಈ ನಡುವೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿ ಮೂರು ದಿನ ಕಳೆದರೂ, ಆರೋಪಿ ಸಮೀವುಲ್ಲಾನ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಮೀವುಲ್ಲಾನ ಪತ್ನಿ ಆರೋಪಿಸಿದ್ದಾರೆ.
Police constable of Lashkar Police station Samiwulla has been accused of Second Marriage and Torture by first wife.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm