ಬ್ರೇಕಿಂಗ್ ನ್ಯೂಸ್
08-03-21 11:42 am Headline Karnataka News Network ಕ್ರೈಂ
ಬೆಳಗಾವಿ, ಮಾ 8: ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ ಬರೋಬ್ಬರಿ 6.675 ಟನ್ ಜಿಲೆಟಿನ್ ಕಡ್ಡಿ, ಡಿಟೋನೇಟರ್ಗಳನ್ನು ಜಿಲ್ಲೆಯ ಹೊನಗಾ ಗ್ರಾಮದ ಬಳಿ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಎರಡು ವಾಹನಗಳಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡದ ರಮೇಶ್ ಲಕ್ಕೋಟಿ, ರಾಜು ಶಿರಗಾವಿ, ಮುಗಳಿ ನಿವಾಸಿ ಅರುಣಮಠದ, ವಿನಯ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಿಂದ ಧಾರವಾಡ, ಗದಗ ಕಡೆ ಸ್ಫೋಟಕಗಳನ್ನು ಈ ನಾಲ್ವರು ಸಾಗಿಸುತ್ತಿದ್ದು, ಸ್ಫೋಟಕಗಳ ಮೌಲ್ಯ ನಾಲ್ಕು ಲಕ್ಷ ಎಂದು ಅಂದಾಜಿಸಲಾಗಿದೆ.
ಟಾಟಾ ಕ್ಯಾಂಟರ್, ಬೊಲೆರೊ ಪಿಕ್ಅಪ್ ವಾಹನಗಳಲ್ಲಿ ಇಷ್ಟು ಪ್ರಮಾಣದ ಸ್ಫೋಟಕಗಳನ್ನು ಬಂಧಿತರು ಸಾಗಿಸುತ್ತಿದ್ದರು. ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಸ್ಫೋಟಕ ಸಾಗಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಕಾಕತಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿತ್ತು. ಹಾಗೂ ಟಾಟಾ ಏಸ್ ವಾಹನ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ಸಂಭವಿಸಿತ್ತು. ಹಾಗೂ ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿತ್ತು.
ಚಿಕ್ಕಬಳ್ಳಾಪುರ ಘಟನೆಗೂ ಮುನ್ನ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕಿತ್ತು..ಆದರೆ ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ರೆ, ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಸ್ಫೋಟದ ತೀವ್ರತೆ ಹೇಗಿತ್ತು ಅಂದ್ರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದ್ದವು.
ಹೀಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರ್ಘಟನೆಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ದೊರೆತ ಜಿಲೆಟಿನ್ ಕಡ್ಡಿಗಳು ಆತಂಕ ಮೂಡಿಸಿವೆ.
Belagavi police have arrested four persons for transporting 6 tons of large gelatin explosives illegally.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am