ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am