ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am