ಬ್ರೇಕಿಂಗ್ ನ್ಯೂಸ್
08-03-21 01:45 pm Mangaluru Correspondent ಕ್ರೈಂ
ಕೊಣಾಜೆ, ಮಾ.8: ಹಿಂದು ಸಂಘಟನೆಯ ಸೋಗಿನಲ್ಲಿದ್ದ ಕಳ್ಳನೊಬ್ಬನನ್ನು ಮೊಂಟೆಪದವಿನ ನಾಗರಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೊಂಟೆಪದವು ಪರಿಸರದಲ್ಲಿ ಹಲವು ಮನೆಗಳಿಂದ ಕಳ್ಳತನಗೈದ ಆರೋಪ ಹೊತ್ತಿರುವ ಹಿಂದು ಸಂಘಟನೆಯ ಕಾರ್ಯಕರ್ತನಾಗಿದ್ದ ತಾರನಾಥ ಯಾನೆ ಮೋಹನ ಬಂಧಿತ ಆರೋಪಿ.
ತಾರನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕದ್ದು ಯಾರಿಗೂ ಸಂಶಯ ಬಾರದಂತೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕದ್ದು ಪರಾರಿಯಾಗಿದ್ದು ಮನೆ ಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರನಾಥ ಎಂಬುದನ್ನು ಖಚಿತಪಡಿಸಿಕೊಂಡು ಭಾನುವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಬೆನ್ನಟ್ಟಿದ್ದ ಸಾರ್ವಜನಿಕರು ಸೆರೆ ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಿಂದ ಕಳ್ಳತನಕ್ಕೆ ಯತ್ನಿಸಿದ್ದಾಗ ಮನೆ ಮಂದಿ ಎಚ್ಚರಗೊಂಡಿದ್ದ ವೇಳೆ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಖುದ್ದು ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು. ಕಳ್ಳತನ ಆರೋಪಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ತಾರನಾಥನನ್ನು ಹಿಂದು ಸಂಘಟನೆಯ ಮುಖಂಡರು ಸಂಘಟನೆಯಿಂದ ಉಚ್ಛಾಟಿಸಿದ್ದರು. ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರನಾಥ ತನ್ನ ಕೃತ್ಯ ಮತ್ತೆ ಮುಂದುವರಿಸಿದ್ದು ಶನಿವಾರ ಸ್ಕೂಟರ್ ಕದ್ದಿದ್ದು, ಸಾರ್ವಜನಿಕರು ಭಾನುವಾರ ರಾತ್ರಿ ಸೆರೆ ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hindu organisation member arrested for constant stealing and robbery in Konaje region in Mangalore. The arrested has been identified as Tarnath.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm