ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am