ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.


ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.


ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am