ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm