ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am