ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm