ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am