ಬ್ರೇಕಿಂಗ್ ನ್ಯೂಸ್
23-03-21 12:39 pm Mangalore Correspondent ಕ್ರೈಂ
ಮಂಗಳೂರು, ಮಾ.23: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಜೀಬ್ ರೆಹಮಾನ್ (30) ಬಂಧಿತ ಆರೋಪಿ. ಮೂಲತಃ ಮಂಜೇಶ್ವರದ ಉಪ್ಪಳ ನಿವಾಸಿಯಾಗಿರುವ ಈತ ನರಿಂಗಾನ ಗ್ರಾಮದ ಕಲ್ಲರಕೋಡಿ ಎಂಬಲ್ಲಿ ವಾಸವಿದ್ದ. ಮಾ.16ರಂದು ಬೆಳ್ಮ ಗ್ರಾಮದ ನಿತ್ಯಾನಂದ ನಗರದಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಮೂರು ಮನೆಗೆ ಹೋಗಿದ್ದಾನೆ. ಅಜ್ಜಿ ಮಾತ್ರ ಇದ್ದ ಮನೆಗೆ ಬಂದಿದ್ದ ಯುವಕ ಮುಜೀಬ್, ಮನೆ ಬಾಡಿಗೆ ಕೊಡುತ್ತೀರಾ ಎಂದು ಕೇಳಿದ್ದಾನೆ. ಇಲ್ಲಪ್ಪಾ ನಾವೇ ಬಾಡಿಗೆ ಮನೆಯಲ್ಲಿದ್ದೇವೆ. ನಾವು ಖಾಲಿ ಮಾಡಿದಾಗ ಹೇಳುತ್ತೀವಿ ಎಂದಿದ್ದಾರೆ. ಅಲ್ಲದೆ, ಆತನ ನಂಬರ್ ಬರೆದಿಡುವಂತೆ ಹೇಳಿದ್ದಾರೆ. ಇದೇ ವೇಳೆ, ನಾನೊಮ್ಮೆ ಮನೆ ಒಳಗೆ ನೋಡುತ್ತೇನೆ ಎಂದು ಒಳಗೆ ಬಂದು ಕೋಣೆ ಒಳಗೆಲ್ಲ ಸುತ್ತಾಡಿದ್ದಾನೆ.

ಇದೇ ವೇಳೆ, ಮನೆಯ ಒಳಗಿಟ್ಟಿದ್ದ ಬ್ಯಾಗಿನಲ್ಲಿದ್ದ ಎರಡು ಚಿನ್ನದ ಸರವನ್ನು ಕಳವು ಮಾಡಿದ್ದಾನೆ. ಬಳಿಕ ಅಜ್ಜಿಯಲ್ಲಿ ಮತ್ತೆ ಬರುತ್ತೇನೆ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಮನೆಗೆ ಮರಳಿದ್ದ ಸೋದರಿಯರು, ತಪಾಸಣೆ ನಡೆಸಿದಾಗ ಮನೆಯಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೋಣಾಜೆ ಠಾಣೆಗೆ ವೀಣಾ ಎಂಬವರು ದೂರು ನೀಡಿದ್ದರು.
ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ಯುವಕನೊಬ್ಬ ಅಲ್ಲಿನ ಮೂರ್ನಾಲ್ಕು ಮನೆಗಳಿಗೆ ತೆರಳಿದ್ದು ಕಂಡುಬಂದಿದೆ. ಅಲ್ಲದೆ, ಮಾಡೂರಿನಲ್ಲೂ ಇದೇ ರೀತಿ ಕೆಲವು ಮನೆಗಳಿಗೆ ತೆರಳಿದ್ದು ಕಂಡುಬಂದಿತ್ತು. ಚಹರೆ ಆಧರಿಸಿ, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮೂರುವರೆ ಪವನ್ ತೂಕದ ಕರಿಮಣಿ ಸರ ಮತ್ತು ಒಂದು ಪವನ್ ತೂಕದ ಸರ ಕಳವಾಗಿತ್ತು. ಅದನ್ನು ಪೊಲೀಸರು ಆರೋಪಿಯಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಆತನ ಬಳಿಯಿದ್ದ ಏಕ್ಟಿವಾ ಹೊಂಡಾ ವಶಕ್ಕೆ ಪಡೆದಿದ್ದಾರೆ.
police arrest thief who flee with gold from a house in Ullal at Mangalore. The arrested has been identified as Majib.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm