ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.

ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am