ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.

ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm