ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.
ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 07:15 pm
Mangalore Correspondent
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm