ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm