ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am