ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm