ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm