ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm