ಬ್ರೇಕಿಂಗ್ ನ್ಯೂಸ್
09-04-21 11:33 am Mangalore Correspondent ಕ್ರೈಂ
ಉಳ್ಳಾಲ, ಎ.9: ಕೇರಳ ರಾಜ್ಯದ ಭಾಗ್ಯಮಿತ್ರ ತಿಂಗಳ ಬಂಪರ್ ಒಂದು ಕೋಟಿ ರೂಪಾಯಿ ಬಹುಮಾನವನ್ನು ಗಿಟ್ಟಿಸಿಕೊಂಡಿರುವುದಾಗಿ ಎಲ್ಲರನ್ನು ನಂಬಿಸಿ ಮಾಧ್ಯಮಗಳಲ್ಲಿ ಪುಕ್ಕಟೆ ಪ್ರಚಾರ ಪಡೆದ ವಾಚ್ ಮನ್ ಮೊಯ್ದಿನ್ ಕುಟ್ಟಿ ದಿಢೀರ್ ನಾಪತ್ತೆಯಾಗಿದ್ದಾನೆ.

ಮೂಲತಃ ಕೇರಳದ ಕ್ಯಾಲಿಕಟ್ ನಿವಾಸಿ ಮೊಯ್ದಿನ್ ಕುಟ್ಟಿ (65) ಕೋಟಿ ಲಾಟರಿಯ ಸುಳ್ಳು ಕತೆ ಕಟ್ಟಿ ಸಾಲದಾತರ ಹಿಡಿಶಾಪಕ್ಕೆ ಗುರಿಯಾಗಿದ್ದಾರೆ. ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಟ್ಟಿ ಕಳೆದ ಎಪ್ರಿಲ್ 4 ರಂದು ಡ್ರಾಗೊಳ್ಳುವ ಭಾಗ್ಯಮಿತ್ರ ಲಾಟರಿಯನ್ನು 100 ರೂಪಾಯಿ ಕೊಟ್ಟು ಖರೀದಿಸಿದ್ದರು. ಎ.4 ರಂದು ಡ್ರಾ ಆದ ಭಾಗ್ಯಮಿತ್ರ ಲಾಟರಿಯ ವಿಜೇತ ನಂಬರನ್ನು( BJ 134048 ) ಆನ್ ಲೈನ್ ನಲ್ಲಿ ತಿಳಿದ ಕುಟ್ಟಿ, ಆ ನಂಬರಿನ ಪ್ರಿಂಟ್ ಔಟ್ ತೆಗೆದು ತಾನು ಖರೀದಿಸಿದ ಲಾಟರಿಗೆ ಅಂಟಿಸಿ ಪೊಟೋ ಪ್ರಿಂಟ್ ಮಾಡಿಸಿ ತನಗೆ ಕೋಟಿ ಬಹುಮಾನ ಬಂದಿರುವುದಾಗಿ ತನ್ನ ಆಪ್ತರನ್ನು ನಂಬಿಸಿದ್ದಾರೆ. ಲಾಟರಿಯ ಅಸಲಿ ಪ್ರತಿಯನ್ನು ಲಾಟರಿ ಏಜೆನ್ಸಿಗೆ ಸರೆಂಡರ್ ಮಾಡಿದ್ದು ಮೂರು ತಿಂಗಳ ಒಳಗೆ ತನ್ನ ಖಾತೆಗೆ ಹಣ ಬರುವುದಾಗಿ ಎಲ್ಲರನ್ನೂ ಕುಟ್ಟಿ ನಂಬಿಸಿದ್ದಾರೆ.

ವಾಚ್ ಮೆನ್ ಕುಟ್ಟಿ ಟಿಕೇಟ್ ಖರೀದಿಸಲೆಂದು ತಾನು ಕೆಲಸ ನಿರ್ವಹಿಸುತ್ತಿದ್ದ ಕಟ್ಟಡದಲ್ಲಿರುವ ಟೈಲರ್ ಓರ್ವರಲ್ಲಿ 500 ರೂಪಾಯಿ ಸಾಲ ಪಡೆದಿದ್ದರು. ಕುಟ್ಟಿಗೆ ಲಾಟರಿ ಹೊಡೆದಿರುವ ವಿಷಯ ತಿಳಿದು ಟೈಲರ್ ಸೇರಿ ಕಟ್ಟಡದ ವರ್ತಕರೆಲ್ಲರೂ ಸಂಭ್ರಮಿಸಿದ್ದರು.

ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಕೆಲಸ ನಿರ್ವಹಿಸಿ ಅಲ್ಲೇ ತಂಗಿರುವ ಕುಟ್ಟಿ ಸ್ಥಳೀಯ ಹಲವರಲ್ಲಿ ಕೈ ಸಾಲ ಮಾಡಿದ್ದು ಅದನ್ನು ಮರೆ ಮಾಚಲು ಲಾಟರಿ ಹೊಡೆದಿರುವ ಬಗ್ಗೆ ಸುಳ್ಳು ಕಥೆ ಸೃಷ್ಟಿಸಿದ್ದಾರೆಂದು ತಿಳಿದು ಬಂದಿದೆ. ಲಾಟರಿ ಹೊಡೆದಿದನ್ನ ನಂಬಿ ಇನ್ನಷ್ಟು ಮಂದಿ ಈತನಿಗೆ ಹಣ ಸಾಲ ನೀಡಿದ್ದಾರಂತೆ. ಇಂದು ಬೆಳಗ್ಗೆ ಕಟ್ಟಡ ನಿವಾಸಿಗಳಿಗೆ ಲಾಟರಿ ವಿಷಯ ಸುಳ್ಳೆಂದು ತಿಳಿಯುತ್ತಿದ್ದಂತೆ ಕುಟ್ಟಿ ಬಳಿ ವಿಚಾರಿಸಲು ತೆರಳಿದಾಗ ಆತ ಪರಾರಿಯಾಗಿದ್ದಾನೆ. ಸಾಲ ಕೊಟ್ಟವರು, ಕೋಟಿ ಸಿಕ್ಕಿದೆಯೆಂದು ಸಂಭ್ರಮಿಸಿದವರು ಬೇಸ್ತು ಬಿದ್ದಿದ್ದಾರೆ.
Read : ತೊಕ್ಕೊಟ್ಟು ; ಸೆಕ್ಯುರಿಟಿಗೆ ಒಲಿದ ಭಾಗ್ಯಮಿತ್ರ !! ಬಡಪಾಯಿಗೆ ಒಂದು ಕೋಟಿ ಕೇರಳ ಲಾಟರಿ ಬಂಪರ್ !
Ullal a Security guard who was told that he has won the One crore Kerala lottery was fake as he edited the ticket in the cyber. He's said to be absconding.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am